Delhi Election
ಬಿಜೆಪಿಯಿಂದ RSS ತುಸು ಅಂತರ ಕಾಯ್ದುಕೊಂಡಿದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಕೆಲ ನಾಯಕರ ಹೇಳಿಕೆಗಳಿಗೆ ವ್ಯತಿರಿಕ್ತವಾದ ಹೇಳಿಕೆಗಳನ್ನು RSS ಮುಖಂಡ ಮೋಹನ್ ಭಾಗವತ್ ನೀಡಿದ್ದರು. ಅದರ ಬೆನ್ನಲ್ಲೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಮಟ್ಟದಲ್ಲಿ ಸೀಟುಗಳ ಸಹ ಬರಲಿಲ್ಲ. ಆದರೆ ಈಗ RSS ಬಿಜೆಪಿ ಪರವಾಗಿ ದೆಹಲಿ ಚುನಾವಣೆ ಅಖಾಡಕ್ಕೆ ಇಳಿದಿದೆ.
ದೆಹಲಿ ವಿಧಾನಸಭೆ ಚುನಾವಣೆ ಗೆದ್ದು ಗದ್ದುಗೆ ಹಿಡಿಯಬೇಕು ಎಂಬ ಬಿಜೆಪಿಯ ಕನಸು ದಶಕಗಳಿಂದಲೂ ಕನಸಾಗಿಯೇ ಉಳಿದಿದೆ. 1998 ರ ಬಳಿಕ ದೆಹಲಿಯಲ್ಲಿ ಒಮ್ಮೆಯೂ ಸಹ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಆದರೆ ಈ ಬಾರಿ ಬಿಜೆಪಿಯನ್ನು ಗೆಲ್ಲಿಸಿಯೇ ತೀರುವ ಹಠ ತೊಟ್ಟು RSS ಅಖಾಡಕ್ಕೆ ಇಳಿದಿದ್ದು, ತನ್ನೆಲ್ಲ ಶಕ್ತಿ ಹಾಗೂ ಯುಕ್ತಿಯನ್ನು ದೆಹಲಿಯಲ್ಲಿ ಎಎಪಿ ಹಾಗೂ ಕಾಂಗ್ರೆಸ್ ವಿರುದ್ಧ ಬಳಸಲಿದೆ.
2013 ರಿಂದಲೂ ಎಎಪಿ ದೆಹಲಿಯಲ್ಲಿ ಗೆಲ್ಲುತ್ತಾ ಬಂದಿದೆ. ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪೂರ್ಣ ಬಹುಮತದಿಂದ ಗೆದ್ದಿದೆ. ಈ ಬಾರಿಯೂ ಗೆಲ್ಲುವ ವಿಶ್ವಾಸದಲ್ಲಿದೆ. ಆದರೆ ಈ ಬಾರಿ ಅರವಿಂದ ಕೇಜ್ರಿವಾಲ್ ಸಿಎಂ ಆಗಿಲ್ಲ. ಭ್ರಷ್ಟಾಚಾರ ನಿರ್ಮೂಲನಾ ಆಂದೋಲನದಿಂದ ಬೆಳೆದು ಬಂದ ಅವರ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಲಾಗಿದೆ. ಇದನ್ನು ಚುನಾವಣೆಯಲ್ಲಿ ಬಿಜೆಪಿ ಮತ್ತು RSS ಬಳಸಿಕೊಳ್ಳಲಿದೆ.
RSS ಈಗಾಗಲೇ ತನ್ನ ಕಾರ್ಯಕರ್ತರನ್ನು ಅಖಾಡಕ್ಕೆ ಇಳಿಸಿದ್ದು, ಚುನಾವಣೆಗೆ ಮುನ್ನ 50 ಸಾವಿರ ಸಭೆಗಳನ್ನು ದೆಹಲಿಯ ವಿವಿಧ ಬೂತ್ ಮಟ್ಟದಲ್ಲಿ ನಡೆಸುವ ಗುರಿ ಹಾಕಿಕೊಂಡಿದೆ. ಇದರ ಬೆನ್ನಲ್ಲೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ RSS ಮುಖ್ಯಸ್ಥ ಮೋಹನ್ ಭಾಗವತ್’ಗೆ ಪತ್ರ ಬರೆದಿದ್ದು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಜೊತೆಗೆ RSS ದೆಹಲಿ ಚುನಾವಣೆಯಲ್ಲಿ ಹಣ ಹಂಚುವ ಕಾರ್ಯ ಮಾಡುತ್ತಿದೆ ಎಂದು ಸಹ ಆರೋಪ ಮಾಡಿದ್ದಾರೆ.
Siddaramaiah: ಶ್ರೀಮಂತ ಸಿಎಂಗಳಲ್ಲಿ ಸಿದ್ದರಾಮಯ್ಯಗೆ ಮೂರನೇ ಸ್ಥಾನ, ಮೊದಲ ಸ್ಥಾನ ಯಾರಿಗೆ?
ದೆಹಲಿಯ 70 ವಿಧಾನಸಭೆ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಫೆಬ್ರವರಿ ತಿಂಗಳಲ್ಲಿ ಮತದಾನ ನಡೆಯುವ ಸಾಧ್ಯತೆ ದಟ್ಟವಾಗಿದೆ. ಕೆಲವೇ ದಿನಗಳಲ್ಲಿ ಚುನಾವಣಾ ಆಯೋಗ ಚುನಾವಣೆ ಅಧಿಸೂಚನೆ ಹೊರಡಿಸಲಿದೆ.